ಮೈಸೂರು: ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೆ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಲೇವಡಿ ಮಾಡಿದರು.
‘ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಏನೆಂದು ಗೊತ್ತಿಲ್ಲ, ಬಿಜೆಪಿ, ಆರ್ಎಸ್ಎಸ್ ಏನು ಎಂದು ಗೊತ್ತಿಲ್ಲ. ಯಾವುದಕ್ಕು ಯಾವ ಸಂಬಂಧವು ಇಲ್ಲದೆ ಏನೇನೋ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರು ಆರ್ಎಸ್ಎಸ್ ಶಾಖೆಗೆ ಬರಲಿ. ನಾನೆ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇನೆ’ ಎಂದು ಹೇಳಿದರು.
ಇದನ್ನೂ ಓದಿ... ನಾವಿಬ್ಬರೂ ಒಂದೇ ಎಂದು ಒಗ್ಗಟ್ಟಿನ ಮಂತ್ರ ಸಾರಿದ ನಿಖಿಲ್ –ಪ್ರಜ್ವಲ್
ಚಾಮರಾಜನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವುದು ಖಚಿತ. ರಾಷ್ಟ್ರಪತಿಗಳನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಂತರ ಚಾಮರಾಜನಗರಕ್ಕೆ ಬರಲಿದ್ದಾರೆ ಎಂದರು.
ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಎಂದು ತಜ್ಞರ ಸಮಿತಿ ಹೇಳಿದೆ. ಈ ಸಂಖ್ಯೆಯನ್ನು ಹೆಚ್ಚು ಮಾಡಲು ಕೇಳಿದ್ದೇನೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.