ಮೈಸೂರು: ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ನಳಿನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಳಿನಿ ಪರ ವಕಾಲತ್ತು ವಹಿಸಿರುವ ಜಗದೀಶ್ ಈ ವಿಷಯ ತಿಳಿಸಿದರು.
ಮೈಸೂರು ವಕೀಲರು ನಾವು ಅಣ್ಣ ತಮ್ಮಂದಿರು ಇದ್ದಂತೆ. ಅವರೂ ಬೆಂಗಳೂರಿಗೆ ಬಂದು ಕೆಲವೊಂದು ಪ್ರಕರಣಗಳ ಪರ ವಕಾಲತ್ತು ವಹಿಸುತ್ತಾರೆ. ಹಾಗೆಯೇ ನಾವೂ ಬಂದಿದ್ದೇವೆ. ಯಾವುದೇ ವಿಶೇಷ ಅರ್ಥ ಕಲ್ಪಿಸಬಾರದು ಎಂದು ಹೇಳಿದರು.
ನಳಿನಿ ಅವರಿಗೆ ಈಗಾಗಲೇ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಆನಂದಕುಮಾರ್ ಆಕ್ಷೇಪಣೆ ಸಲ್ಲಿಸಬೇಕಿದೆ.ನ್ಯಾಯಾಲಯ ಸುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.