ADVERTISEMENT

ಲೋಕನಹಳ್ಳಿ: ಸಂಭ್ರಮದ ಕಾರ್ತಿಕ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 5:52 IST
Last Updated 18 ನವೆಂಬರ್ 2025, 5:52 IST
ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಸಿದ್ದಪ್ಪಾಜಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಸೋಮವಾರ ವಿಶೇಷ ಪೂಜೆಯಲ್ಲಿ ಕುದಿಯುತ್ತಿರುವ ಎಣ್ಣೆಯಲ್ಲಿ ಕಜ್ಜಾಯ ಎತ್ತಲಾಯಿತು
ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಸಿದ್ದಪ್ಪಾಜಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಸೋಮವಾರ ವಿಶೇಷ ಪೂಜೆಯಲ್ಲಿ ಕುದಿಯುತ್ತಿರುವ ಎಣ್ಣೆಯಲ್ಲಿ ಕಜ್ಜಾಯ ಎತ್ತಲಾಯಿತು   

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ಸಿದ್ದಪ್ಪಾಜಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಸೋಮವಾರ ವಿಶೇಷ ಪೂಜೆ ಸಂಭ್ರಮದಿಂದ ನೆರವೇರಿತು.

ಪ್ರತಿವರ್ಷದಂತೆ ಕುದಿಯುತ್ತಿರುವ ಎಣ್ಣೆಯಲ್ಲಿ ಕಜ್ಜಾಯ ಎತ್ತುವ ಪೂಜೆ ಭಕ್ತರ ಗಮನ ಸೆಳೆಯಿತು. ಸೋಮವಾರ ಬೆಳಿಗ್ಗೆ ನಡೆದ ಧಾರ್ಮಿಕ ವಿಧಿ- ವಿಧಾನಗಳ ನಂತರ ದೇವಾಲಯದ ಅರ್ಚಕ ಸಿದ್ಧರಾಜು ಅವರು ಕುದಿಯುತ್ತಿರುವ ಎಣ್ಣೆಯಿಂದ ಕಜ್ಜಾಯವನ್ನು ಎತ್ತುವ ಕಾರ್ಯ ನೆರವೇರಿಸಿದರು. ನಂತರ ಆ ಎಣ್ಣೆಯನ್ನು ತೀರ್ಥರೂಪದಲ್ಲಿ ಭಕ್ತರಿಗೆ ಎರಚುವ ಮೂಲಕ ಆಶೀರ್ವಾದ ನೀಡಿದರು.

ಲೊಕ್ಕನಹಳ್ಳಿ, ಹುತ್ತೂರು, ಪಿಜಿಪಾಳ್ಯ, ಒಡೆಯರಪಾಳ್ಯ ಸೇರಿ ಅನೇಕ ಕಡೆಗಳಿಂದ ಭಕ್ತರು ಆಗಮಿಸಿ ಸಿದ್ದಪ್ಪಾಜಿ ದೇವರ ದರ್ಶನ ಪಡೆದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.