ADVERTISEMENT

ಇಲಾಖೆಗಳ ನಡುವೆ ಸಮನ್ವಯ ಇರಬೇಕು: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2023, 8:49 IST
Last Updated 28 ಆಗಸ್ಟ್ 2023, 8:49 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ   

ಮೈಸೂರು: ಇಲಾಖೆಗಳ ನಡುವೆ ಸಮನ್ವಯ ಇರಬೇಕು. ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ನೀರಾವರಿ ‌ಇಲಾಖೆಯ ಅಧಿಕಾರಿಗಳು ನಾಲೆಗಳ ಮೇಲೆ ಸಂಚರಿಸಿ ವಾಸ್ತವ ಸ್ಥಿತಿ ಅರಿಯಬೇಕು‌. ಕಚೇರಿಯಲ್ಲೇ ಇದ್ದರೆ ಪ್ರಯೋಜನ ಆಗುವುದಿಲ್ಲ ಎಂದರು.

ಕೃಷಿ ಹಾಗೂ ಸಂಬಂಧಿಸಿದ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇದೆ. ಇದು ಮುಂದುವರಿಯಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಮೇಲ್ವಿಚಾರಣೆ ಮಾಡಬೇಕು. ಸಮನ್ವಯ ಇಲ್ಲದಿದ್ದರೆ ಯಾವ ಕಾರ್ಯಕ್ರಮವೂ‌ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವುದಿಲ್ಲ. ನಿರ್ಲಕ್ಷ್ಯದ ಮನೋಭಾವ ಹೋಗಬೇಕು. ಜಿಲ್ಲಾಧಿಕಾರಿಯಾದವರು ಇದಕ್ಕೆ ಆದ್ಯತೆ ಕೊಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.