ADVERTISEMENT

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ: ವಲಯಮಟ್ಟದ ಕಾರ್ಯಾಗಾರ ಇಂದು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2018, 14:50 IST
Last Updated 8 ಡಿಸೆಂಬರ್ 2018, 14:50 IST

ಮೈಸೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕೆ.ಆರ್‌.ನಗರ ತಾಲ್ಲೂಕು ಸಮಿತಿಯು ಡಿ. 9ರಂದು ಬೆಳಿಗ್ಗೆ 10.30ಕ್ಕೆ ಕೆ.ಆರ್‌.ನಗರದ ಕರುನಾಡು ಜ್ಞಾನೋದಯ ವಿದ್ಯಾಸಂಸ್ಥೆಯ ಆವರಣದಲ್ಲಿ ಮೈಸೂರು ವಲಯಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.

ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಉದ್ಘಾಟಿಸುವರು. ಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷ ಜಿ.ಟಿ.ರಾಮೇಗೌಡ ಅಧ್ಯಕ್ಷತೆವಹಿಸುವರು. ಸಮಿತಿಯ ರಾಜ್ಯ ಕಾರ್ಯದರ್ಶಿ ಈ.ಬಸವರಾಜು, ಕೇರಳದ ಮುಖಂಡ ಗಿರೀಶ್‌, ಸಹಕಾರ್ಯದರ್ಶಿ ಎಚ್‌.ವಿ.ಮುರುಳೀಧರ್‌, ಮೈಸೂರು ಜಿಲ್ಲಾಧ್ಯಕ್ಷ ಎಂ.ಆರ್‌.ಪ್ರಕಾಶ್‌, ಕಾರ್ಯಕಾರಿ ಸಮಿತಿ ಸದಸ್ಯ ಸಿ.ಕೆ.ಕೃಷ್ಣೇಗೌಡ, ಕಾರ್ಯದರ್ಶಿ ಜಿ.ಬಿ.ಸಂತೋಷಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT