ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಕೋರ್ಸ್ಗಳ 2018–19ನೇ ಸಾಲಿನ ಪ್ರವೇಶಾತಿಯನ್ನು ಅ.20ರವರೆಗೆ ವಿಸ್ತರಿಸಲಾಗಿದೆ.
ಇದಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಅನುಮತಿ ನೀಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್ಒಯು ಕುಲಪತಿ ಪ್ರೊ.ಶಿವಲಿಂಗಯ್ಯ ತಿಳಿಸಿದ್ದಾರೆ.
ಯುಜಿಸಿ ಮಾನ್ಯತೆ ಪಡೆದ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ದಂಡ ಸಹಿತ ಪ್ರವೇಶಕ್ಕೆ ಈ ಹಿಂದೆ ಅ.1 ನಿಗದಿಪಡಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.