ADVERTISEMENT

ಮೈಸೂರಿನ ಹಲವೆಡೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 7:25 IST
Last Updated 26 ನವೆಂಬರ್ 2020, 7:25 IST
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ಮೈಸೂರು ನಗರದ ಹಲವೆಡೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದರು.
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ಮೈಸೂರು ನಗರದ ಹಲವೆಡೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದರು.   

ಮೈಸೂರು: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹಲವೆಡೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದರು.

ಪುರಭವನದ ಆವರಣದಲ್ಲಿ ಬಹಿರಂಗ ಸಭೆ ನಡೆಯಿತು. ಕೆ ಎಸ್ ಆರ್ ಟಿ ಸಿ ನೌಕರರು ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಬ್ಯಾಂಕ್ ನೌಕರರು ನಜರ್ ಬಾದಿನ ಕೆನರಾ ಬ್ಯಾಂಕ್ ಮುಂಭಾಗ ಧರಣಿ ನಡೆಸಿದರು.

ಅಗ್ರಹಾರ, ಹೆಬ್ಬಾಳ, ವಿಜಯನಗರ, ಒಂಟಿಕೊಪ್ಪಲು, ರೈಲ್ವೆ ನಿಲ್ದಾಣದ ಸಮೀಪ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.