ADVERTISEMENT

ಬೆಂಗಳೂರು–ಮೈಸೂರು ರಸ್ತೆಯಲ್ಲಿ ಒತ್ತುವರಿ ತೆರವು ಕಾರ್ಯ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 9:42 IST
Last Updated 7 ಡಿಸೆಂಬರ್ 2021, 9:42 IST
   

ಮೈಸೂರು: ಇಲ್ಲಿನ ಬೆಂಗಳೂರು– ಮೈಸೂರು ರಸ್ತೆಯಲ್ಲಿ ಪಾಲಿಕೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವು ಕಾರ್ಯ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್‌ಟಿಎಸ್‌)ದ ಆಸುಪಾಸಿನಲ್ಲಿ ಪ್ರಾರ್ಥನಾ ಮಂದಿರಗಳು ಸೇರಿದಂತೆ ಕೆಲವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದ ಕುರಿತು ಈಚೆಗಷ್ಟೇ ನ್ಯಾಯಾಲಯವು ತೆರವುಗೊಳಿಸುವಂತೆ ಆದೇಶಿಸಿತ್ತು. ಕೆಲ ದಿನಗಳ ಹಿಂದೆ ಒತ್ತುವರಿ ತೆರವಿಗೆ ಹೋದಾಗ ಸ್ಥಳೀಯರು ಪ್ರತಿಭಟನೆ ನಡೆಸಿ, ತಡೆದಿದ್ದರು.

ಹೆಚ್ಚಿನ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿಯನ್ನು ತೆರವುಗೊಳಿಸಿದರು. ಈ ವೇಳೆ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.