ADVERTISEMENT

ಚಾಮುಂಡಿ ಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶಾಶ್ವತ ಕಾಮಗಾರಿ: ಸಚಿವ ಎಸ್.ಟಿ.ಎಸ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 12:58 IST
Last Updated 1 ನವೆಂಬರ್ 2021, 12:58 IST
ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಜಾಗವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಪರಿಶೀಲನೆ ನಡೆಸಿದರು
ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಜಾಗವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಪರಿಶೀಲನೆ ನಡೆಸಿದರು   

ಮೈಸೂರು: ಚಾಮುಂಡಿ ಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.

ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಜಾಗವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಈ ಸಂಬಂಧ ನಾಳೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು. ಜಿಲ್ಲೆಯ ಎಲ್ಲ 11 ಶಾಸಕರಿಗೂ ಮುಖ್ಯಮಂತ್ರಿ ಜತೆ ಮಾತನಾಡಲು ಆಹ್ವಾನ ನೀಡಿದ್ದೇನೆ ಎಂದರು.

ADVERTISEMENT

ದೀಪಾವಳಿ ನಂತರ ಸಚಿವ ಸಿ ಸಿ ಪಾಟೀಲ ಸಹ ಚಾಮುಂಡಿ ಬೆಟ್ಟಕ್ಕೆ ಬಂದು, ಭೂ ಕುಸಿತವಾಗಿರುವ ಸ್ಥಳವನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.