ADVERTISEMENT

ತಿ.ನರಸೀಪುರದಲ್ಲಿ  ಚಿರತೆ ದಾಳಿ: ಯುವತಿ ಸಾವು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 16:28 IST
Last Updated 1 ಡಿಸೆಂಬರ್ 2022, 16:28 IST
ಚಿರತೆ
ಚಿರತೆ   

ಮೈಸೂರು: ತಿ.ನರಸೀಪುರ ತಾಲ್ಲೂಕಿನ ಎಸ್‌.ಕೆಬ್ಬೆಹುಂಡಿ ಗ್ರಾಮದಲ್ಲಿ ಗುರುವಾರ ಚಿರತೆಯೊಂದು ದಾಳಿ ನಡೆಸಿ ಯುವತಿಯನ್ನು ಕೊಂದು ಹಾಕಿದೆ.

ಗ್ರಾಮದ ಮೇಘನಾ (22) ಮೃತ ಯುವತಿ. ಸಂಜೆ ವೇಳೆ ಮನೆಯ ಹಿತ್ತಲಿಗೆ ತೆರಳಿದ್ದಾಗ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡ ಅವರನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಪ್ರತಿಭಟನೆ: ‘ಕಳೆದ ತಿಂಗಳಷ್ಟೇ ಚಿರತೆಯು ಎಂ.ಎಲ್‌.ಹುಂಡಿ ಗ್ರಾಮದ ಚನ್ನಮಲ್ಲು ಎಂಬ ಯುವಕನನ್ನು ಕೊಂದಿತ್ತು. ಇದೀಗ ಯುವತಿಯ ಬಲಿ ಪಡೆದಿದೆ. ನಿರಂತರ ದಾಳಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕ್ರಮವಹಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.

ADVERTISEMENT

ಸ್ಥಳಕ್ಕೆ ಆಗಮಿಸಿ ಡಿವೈಎಸ್‌ಪಿ ಗೋವಿಂದರಾಜು, ಪಿಎಸ್ಐ ತಿರುಮಲ್ಲೇಶ್, ಸಿಬ್ಬಂದಿ ಡಾ.ಭಾರತಿ, ರೇವಣ್ಣ ಗ್ರಾಮಸ್ಥರ ಮನವಿ ಆಲಿಸಿದರು. ಚಿರತೆಯು ಗ್ರಾಮದ ಹೊರವಲಯದ ರಸ್ತೆಯಲ್ಲಿ ಓಡಾಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.