ಮೈಸೂರು: ಎಚ್ ಡಿ ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಜಿ.ಬಿ. ಸರಗೂರಿನಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಬುಧವಾರ ಸೆರೆಯಾಗಿದೆ.
ಚಿರತೆ ಕಾಟ ಹೆಚ್ಚಾದ್ದರಿಂದ ತಿಮ್ಮಾಚಾರಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೋನನ್ನು ಇರಿಸಲಾಗಿತ್ತು. ಈಗ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮದ ಜನ ನಿಟ್ಟುಸಿರುಬಿಟ್ಟಿದ್ದಾರೆ.
ಆಹಾರ ಅರಸಿ ಕಾಡಿನಂಚಿನ ಗ್ರಾಮಗಳಿಗೆ ಬರುತ್ತಿರುವ ವನ್ಯಜೀವಿಗಳ ಸಂಖ್ಯೆ ಹೆಚ್ಚುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.