ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕೇತಳ್ಳಿ ಗ್ರಾಮದಲ್ಲಿ ಐದು ವರ್ಷದ ಗಂಡು ಚಿರತೆ ಭಾನುವಾರ ಬೋನಿಗೆ ಬಿದ್ದಿದೆ.
ಮೀನಾಕ್ಷಿ ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಬೋನನ್ನು ಇರಿಸಿತ್ತು.
ಅರಣ್ಯಾಧಿಕಾರಿ ಮಧು, ಡಿಆರ್ಎಫ್ ಸುನೀತಾ ಲಾಲಪ್ಪ ಮತ್ತು ಸಿಬ್ಬಂದಿ ಭೇಟಿ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಕಾಡಿಗೆ ಬಿಡಲು ಸಿದ್ದತೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.