ಮೈಸೂರು: ನಂಜನಗೂಡು ತಾಲ್ಲೂಕಿನ ತುಂಬ್ನೇರಳೆ ಗ್ರಾಮದಲ್ಲಿ 3 ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ.
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಣಿಸಿಕೊಂಡ ಚಿರತೆ ನಾಯಿ, ಕುರಿಗಳನ್ನು ತಿಂದು ಹಾಕಿತ್ತು. ಚಿರತೆಯನ್ನು ಕಂಡ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳಿಗೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿದ್ದವು. ಹೀಗಾಗಿ, ನಂದೀಶ್ ಎಂಬುವವರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು.
ಭಾನುವಾರ ಬೆಳಿಗ್ಗೆ ಚಿರತೆ ಬೋನಿಗೆ ಸೆರೆಯಾಗಿದೆ. ಈ ವರ್ಷದಲ್ಲಿ ಸೆರೆಯಾದ 2ನೇ ಚಿರತೆ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.