ADVERTISEMENT

ಜೆಡಿಎಸ್‌: ಜಿಟಿಡಿಗೆ ಮೈಸೂರು, ಸಾ.ರಾ. ಮಹೇಶ್‌ಗೆ ಮಂಡ್ಯ ಕ್ಷೇತ್ರ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 16:28 IST
Last Updated 5 ಫೆಬ್ರುವರಿ 2024, 16:28 IST
ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ   

ಮೈಸೂರು: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾದಳವು ಪ್ರತಿ ಲೋಕಸಭೆ ಕ್ಷೇತ್ರಕ್ಕೆ ಉಸ್ತುವಾರಿ ನಾಯಕರು ಹಾಗೂ ಸಹ ನಾಯಕರನ್ನು ನೇಮಿಸಿದೆ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ನಾಯಕರಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ನೇಮಕಗೊಂಡಿದ್ದಾರೆ.

ಸಹ ನಾಯಕರಾಗಿ ಅರಕಲಗೂಡು ಶಾಸಕ ಎ. ಮಂಜು ಹಾಗೂ ತಿ. ನರಸೀಪುರ ಮಾಜಿ ಶಾಸಕ ಎಂ. ಅಶ್ವಿನ್‌ಕುಮಾರ್ ನೇಮಕಗೊಂಡಿದ್ದಾರೆ. ಮೈಸೂರಿನವರೇ ಆದ ಮಾಜಿ ಶಾಸಕ ಸಾ.ರಾ. ಮಹೇಶ್ ಅವರಿಗೆ ಮಂಡ್ಯ ಕ್ಷೇತ್ರದ ಉಸ್ತುವಾರಿ ನಾಯಕ ಹಾಗೂ ಶಾಸಕ ಜಿ.ಡಿ. ಹರೀಶ್‌ ಗೌಡ ಅವರಿಗೆ ಸಹ ನಾಯಕ ಜವಾಬ್ದಾರಿಯನ್ನು ಪಕ್ಷವು ನೀಡಿದೆ.

ಈ ನಾಯಕರು ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ಸಮನ್ವಯ ಸಾಧಿಸುವ ಕೆಲಸವನ್ನೂ ಮಾಡಲಿದ್ದಾರೆ.

ADVERTISEMENT

ಉಳಿದಂತೆ ಕ್ಷೇತ್ರವಾರು ಉಸ್ತುವಾರಿಗಳ ನೇಮಕದ ಪಟ್ಟಿ ಇಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.