ಮೈಸೂರು: ಕಾಂಗ್ರೆಸ್ ಮುಖಂಡ ಎ.ಮಂಜು ಅವರು ಬಿಜೆಪಿ ಮುಖಂಡ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿ ಲೋಕಸಭಾ ಚುನಾವಣೆಯ ಸಂಬಂಧ ಚರ್ಚಿಸಿದ್ದಾರೆ.
‘ಹಾಸನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಪರ್ಧಿಸಿದರೆ ಮಾತ್ರ ನಾನು ತಟಸ್ಥನಾಗಿ ಉಳಿಯುವೆ. ಪ್ರಜ್ವಲ್ ಸ್ಪರ್ಧಿಸಿದರೆ ಬಿಜೆಪಿಯಿಂದ ಸ್ಪರ್ಧಿಸುವ ಬಗ್ಗೆ ಚಿಂತಿಸಬೇಕಾಗುವುದು’ ಎಂದು ಪ್ರಸಾದ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿದವು.
ಮಂಡ್ಯದಿಂದ ನಿಖಿಲ್ ಹಾಗೂ ಹಾಸನದಿಂದ ಪ್ರಜ್ವಲ್ ಅವರನ್ನು ದೇವೇಗೌಡರು ದೂರ ಇರಿಸಬೇಕು. ಅಲ್ಲದೇ, ಮಂಡ್ಯದಲ್ಲಿ ಕಾಂಗ್ರೆಸ್ ಸುಮಲತಾ ಅವರಿಗೆ ಬೆಂಬಲಿಸಬೇಕು. ಇಲ್ಲವಾದಲ್ಲಿ ಜೆಡಿಎಸ್ಗೆ ಲಾಭವಾಗುವುದು ಎಂದು ಪ್ರಸಾದ್ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.