ADVERTISEMENT

ಪ್ರೀತಿ ಒಪ್ಪದ ಯುವತಿಗೆ ಚಾಕುವಿನಿಂದ ಇರಿದು, ಆಸ್ಪತ್ರೆಗೆ ಸೇರಿಸಿ ತಾಳಿ ಕಟ್ಟಿದ!

ತೀವ್ರವಾಗಿ ಗಾಯಗೊಂಡಿದ್ದ ಯುವತಿ ಸಾವು

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 1:02 IST
Last Updated 6 ಜುಲೈ 2025, 1:02 IST
ಅಭಿಷೇಕ್‌
ಅಭಿಷೇಕ್‌   

ಮೈಸೂರು: ಪ್ರೀತಿಸಲು ನಿರಾಕರಿಸಿದ ಸ್ನೇಹಿತೆಗೆ ಚಾಕುವಿನಿಂದ ಇರಿದ ಯುವಕ ನಂತರ ಆಕೆಗೆ ತಾಳಿ ಕಟ್ಟಿ ವಿಕೃತಿ ಮೆರೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಶನಿವಾರ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಪೂರ್ಣಿಮಾ (36) ಮೃತರು. ‘ಅದೇ ಗ್ರಾಮದ ಅಭಿಷೇಕ್‌ ಮತ್ತು ಆಕೆ ಬಾಲ್ಯ ಸ್ನೇಹಿತರಾಗಿದ್ದರು. ಪೂರ್ಣಿಮಾ ಮೈಸೂರಿನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ತನ್ನನ್ನು ಪ್ರೀತಿಸುವಂತೆ ಯುವಕ ಒತ್ತಾಯಿಸುತ್ತಿದ್ದ. ಮನೆಯವರ ಒಪ್ಪಿಗೆ ಇಲ್ಲದ ಕಾರಣ ಆಕೆ ಪ್ರೀತಿ ನಿರಾಕರಿಸುತ್ತಿದ್ದಳು. ಶುಕ್ರವಾರ ಮಧ್ಯಾಹ್ನ ಇಬ್ಬರೂ ಕೃಷ್ಣಮೂರ್ತಿಪುರಂನಲ್ಲಿರುವ ಉದ್ಯಾನಕ್ಕೆ ತೆರಳಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿಯಾಗಿದ್ದು, ಇರಿದಿದ್ದಾನೆ. ಬಳಿಕ ಆತನೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ಆಕೆ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ತಾಳಿ ಕಟ್ಟಿ ಮೊಬೈಲ್‌ ಫೋನ್‌ನಲ್ಲಿ ಸೆಲ್ಫಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾನೆ. ಪರಾರಿಯಾಗಿದ್ದ ಅಭಿಷೇಕ್‌ನನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.