ಪಿರಿಯಾಪಟ್ಟಣ ತಾಲ್ಲೂಕಿನ ಉತ್ತೇನಹಳ್ಳಿ ಗೇಟ್ ಬಳಿ ಇರುವ ಖಾಸಗಿ ಹೋಟೆಲ್ ಮುಂಭಾಗ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಸಿದ ಆರೋಪಿ ಮತೀನ್ಖಾನ್ ಬಂಧಿಸಿದ ಪೊಲೀಸರು ಸ್ಥಳ ಮಾಜಾರ್ ನಡೆಸಿದರು
ಪಿರಿಯಾಪಟ್ಟಣ: ಮಾರಾಟ ಮಾಡುವ ಸಲುವಾಗಿ 240 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಆಟೋ ಚಾಲಕ ಹಾಲಿ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯಲ್ಲಿ ವಾಸಿಸುತ್ತಿರುವ ಮತೀನ್ಖಾನ್ (22) ಬಂಧಿತ ಆರೋಪಿ.
ಪಂಚವಳ್ಳಿ- ಗೋಣಿಕೊಪ್ಪ ರಸ್ತೆಯಲ್ಲಿನ ಉತ್ತೇನಹಳ್ಳಿ ಗೇಟ್ ಬಳಿ ಇರುವ ಖಾಸಗಿ ಹೊಟೇಲ್ ಮುಂಭಾಗ ಆರೋಪಿ ಮತೀನ್ಖಾನ್ ಭಾನುವಾರ ಮಧ್ಯಾಹ್ನ ಪ್ಲಾಸ್ಟಿಕ್ ಕವರ್ನಲ್ಲಿ ಗಾಂಜಾ ಇಟ್ಟುಕೊಟ್ಟು ಸಾರ್ವಜನಿಕರಿಗೆ ₹ 150 ರಿಂದ ₹ 200ಗಳಿಗೆ ಮಾರಾಟ ಮಾಡುತ್ತಿದ್ದು ಈ ವೇಳೆ ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು, ಪಿಎಸ್ಐ ನವ್ಯಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿ ತಪಾಸಣೆ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂ ಮಹಾದೇವಪ್ಪ, ಬಸವರಾಜು, ಪುನೀತ್, ಅಣ್ಣಯ್ಯ, ಮಂಜು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.