ADVERTISEMENT

ಮೈಸೂರು | ಕೋವಿಡ್–19 ಲಸಿಕೆ ಪಡೆದ ನಂತರ ಸಾವು; ತನಿಖೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 6:59 IST
Last Updated 15 ನವೆಂಬರ್ 2021, 6:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಕೋವಿಡ್ ಲಸಿಕೆ ಪಡೆದ ನಂತರ ಅಸ್ವಸ್ಥಗೊಂಡ ಇಲ್ಲಿನ ಅಶೋಕಪುರಂ ನಿವಾಸಿ ಸುರೇಶ್ (39) ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬಿಎಸ್ ಪಿ ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಕೆ.ಆರ್‌.ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.

ಸುರೇಶ್ ಅವರಿಗೆ ಶುಕ್ರವಾರ ಲಸಿಕೆ ಪಡೆದ ನಂತರ ಅಸ್ವಸ್ಥಗೊಂಡರು. ನಂತರ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಭಾನುವಾರ ರಾತ್ರಿ ಮೃತಪಟ್ಟರು.

ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್, ಸಾವಿಗೆ ಲಸಿಕೆ ಕಾರಣ ಅಲ್ಲ. ಸುರೇಶ್ ಅವರಿಗೆ ಈ ಮೊದಲೇ ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗ ಇತ್ತು. ಲಸಿಕೆ ಕೊಡದೇ ಹೋಗಿದ್ದರೂ ಅವರು ಅಸ್ವಸ್ಥಗೊಳ್ಳುತ್ತಿದ್ದರು. ಅಧಿಕ ರಕ್ತದೊತ್ತಡದಿಂದ ಅವರ ಮಿದುಳಿಗೆ ಹಾನಿಯಾಗಿತ್ತು. ಇವರಿಗೆ ನೀಡಿದ ವೈಯಲ್‌ನಿಂದ ಲಸಿಕೆ ಪಡೆದ ಇತರ 9 ಮಂದಿ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.