ಮೈಸೂರು: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಅರವಿಂದನಗರದ ಬಸ್ ಡಿಪೋ ಹಿಂಭಾಗದ ಕಾಂಪೌಂಡ್ ಕುಸಿದು, ನಂಜುಂಡಸ್ವಾಮಿ (58) ಎಂಬವರು ಮೃತಪಟ್ಟಿದ್ದಾರೆ.
ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಗೋಡೆ ಶಿಥಿಲಗೊಂಡು ಕುಸಿದುಬಿದ್ದಿದೆ. ಸಮೀಪ ನಿಲ್ಲಿಸಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ.
ಧಾರಾಕಾರ ಮಳೆ: ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.
ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ತಾಸು ಜೋರಾಗಿ ಸುರಿಯಿತು. ಆ ಬಳಿಕ ಜಿಟಿಜಿಟಿ ಮಳೆ ಮುಂದುವರಿಯಿತು.
ಜಿಲ್ಲೆಯ ಪಿರಿಯಾಪಟ್ಟಣ, ತಿ.ನರಸೀಪುರ, ಹುಣಸೂರು, ಸಾಲಿಗ್ರಾಮ, ಬೆಟ್ಟದಪುರ, ಜಯಪುರ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.