ADVERTISEMENT

ಮೈಸೂರಿನಲ್ಲಿ ಭಾರಿ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 14:43 IST
Last Updated 9 ಅಕ್ಟೋಬರ್ 2020, 14:43 IST
ಮೈಸೂರಿನ ಅರವಿಂದ ನಗರದಲ್ಲಿ ಗೋಡೆ ಕುಸಿದು ವಾಹನಗಳು ಜಖಂಗೊಂಡಿರುವುದು
ಮೈಸೂರಿನ ಅರವಿಂದ ನಗರದಲ್ಲಿ ಗೋಡೆ ಕುಸಿದು ವಾಹನಗಳು ಜಖಂಗೊಂಡಿರುವುದು   

ಮೈಸೂರು: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಅರವಿಂದನಗರದ ಬಸ್‌ ಡಿಪೋ ಹಿಂಭಾಗದ ಕಾಂಪೌಂಡ್‌ ಕುಸಿದು, ನಂಜುಂಡಸ್ವಾಮಿ (58) ಎಂಬವರು ಮೃತಪಟ್ಟಿದ್ದಾರೆ.

ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಗೋಡೆ ಶಿಥಿಲಗೊಂಡು ಕುಸಿದುಬಿದ್ದಿದೆ. ಸಮೀಪ ನಿಲ್ಲಿಸಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ.

ಧಾರಾಕಾರ ಮಳೆ: ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.

ADVERTISEMENT

ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ತಾಸು ಜೋರಾಗಿ ಸುರಿಯಿತು. ಆ ಬಳಿಕ ಜಿಟಿಜಿಟಿ ಮಳೆ ಮುಂದುವರಿಯಿತು.

ಜಿಲ್ಲೆಯ ಪಿರಿಯಾಪಟ್ಟಣ, ತಿ.ನರಸೀಪುರ, ಹುಣಸೂರು, ಸಾಲಿಗ್ರಾಮ, ಬೆಟ್ಟದಪುರ, ಜಯಪುರ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.