ADVERTISEMENT

‘ಮೇಕೆದಾಟು: ಸಿದ್ದರಾಮಯ್ಯ ಕೊಡುಗೆ’

ಸಂಸದ ಪ್ರತಾಪಸಿಂಹಗೆ ನೇರ ಸವಾಲೆಸೆದ ಎಂ.ಲಕ್ಷ್ಮಣ್‌

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 3:10 IST
Last Updated 3 ಆಗಸ್ಟ್ 2021, 3:10 IST
ಎಂ.ಲಕ್ಷ್ಮಣ
ಎಂ.ಲಕ್ಷ್ಮಣ   

ಮೈಸೂರು: ಮೇಕೆದಾಟು ಹಾಗೂ ರಾಷ್ಟ್ರೀಯ ಹೆದ್ದಾರಿ 275 ಯೋಜನೆಗಳು ಸಿದ್ದರಾಮಯ್ಯ ಅವರ ಕೊಡುಗೆಗಳು. ಇದು ಸುಳ್ಳೆಂದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿಯಾಗುವೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.

‘‍ಯೋಜನೆಗಳು ಬಿಜೆಪಿ ಸರ್ಕಾರದ ಕೊಡುಗೆಗಳು ಎಂದು ಹೇಳಿರುವ ಸಂಸದ ಪ್ರತಾಪ ಸಿಂಹ ಅದನ್ನು ಸಾಬೀತು ಮಾಡದಿದ್ದರೆ ಅವರನ್ನು ಸುಳ್ಳುಗಾರ ಪ್ರತಾಪಸಿಂಹ ಎಂದು ಕರೆಯಬೇಕಾಗುತ್ತದೆ’ ಎಂದು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ 2017ರಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿದ್ದರು. 2014ರಲ್ಲಿ ರಾಷ್ಟ್ರೀಯ ಹೆದ್ದಾರಿ 275ಕ್ಕಾಗಿ ಕೇಂದ್ರ ಸಚಿವ ಆಸ್ಕರ್‌ ಫರ್ನಾಂಡೀಸ್‌ ಜತೆ ಮಾತುಕತೆ ನಡೆಸಿದ್ದರು’ ಎಂದರು.

ADVERTISEMENT

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್, ಕೆಪಿಸಿಸಿ ಸದಸ್ಯ ಶ್ರೀನಾಥ್‌ಬಾಬು, ಗ್ರಾಮಾಂತರ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಡೊನಾಲ್ಡ್, ನಗರ ಸೇವಾ ದಳ ಅಧ್ಯಕ್ಷ ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.