ADVERTISEMENT

ಮೈಸೂರು: ಸಚಿವ ಸಿ.ಸಿ.ಪಾಟೀಲ ಕಾರು, ಬೈಕ್ ಮಧ್ಯೆ ಅಪಘಾತ

ಬೈಕ್ ಸವಾರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 4:37 IST
Last Updated 6 ಅಕ್ಟೋಬರ್ 2021, 4:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಬೈಕ್‌ ಡಿಕ್ಕಿಯಾಗಿಮಂಗಳವಾರ ಸಂಜೆ ಬೈಕ್ ಸವಾರ ರವಿಕುಮಾರ್ (40) ಗಾಯಗೊಂಡರು.

‘ಸಚಿವರು ನಗರಕ್ಕೆ ಬರುತ್ತಿದ್ದಾಗ ಘಟನೆ ನಡೆದಿದ್ದು, ಸಯ್ಯಾಜಿರಾವ್ ರಸ್ತೆಯ ಆರ್‌ಎಂಸಿ ಸಮೀಪ ಸವಾರ, ಕಾರಿನ ಒಂದು ಭಾಗಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದರು. ಅವರ ಎಡಗಾಲಿಗೆ ಗಾಯಗಳಾದವು. ಕೂಡಲೇ ಅವರನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು. ಎರಡೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ರವಿಕುಮಾರ್ ವಿರುದ್ಧ ಐಪಿಸಿ 279, 337ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅವರು ಮದ್ಯಸೇವಿಸಿ ವಾಹನ ಚಾಲನೆ ಮಾಡುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಜನರ ಗುಂಪು ಸಚಿವರ ಕಾರನ್ನು ಸುತ್ತುವರೆದು ಗಲಾಟೆ ಆರಂಭಿಸಿತು. ಸಮೀಪದಲ್ಲೇ ಇದ್ದ ಪೊಲೀಸರು ಮಧ್ಯಪ್ರವೇಶಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.

ADVERTISEMENT

ಸಿ.ಸಿ.ಪಾಟೀಲ ಅವರು ಇಲ್ಲಿನ ವಿದ್ಯಾರಣ್ಯಪುರಂ ಉದ್ಯಾನದಲ್ಲಿ ಶಾಸಕ ಎಸ್.ಎ.ರಾಮದಾಸ್ ಅವರು ಆಯೋಜಿಸಿದ್ದ ‘ಮೋದಿ ಯುಗ್ ಉತ್ಸವ್’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುತ್ತಿದ್ದ ವೇಳೆ ಘಟನೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.