ADVERTISEMENT

ಸಂತೋಷ್ ಯಾರೆಂದೇ ಗೊತ್ತಿಲ್ಲ; ರಾಜೀನಾಮೆ ನೀಡುವುದಿಲ್ಲ- ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 9:14 IST
Last Updated 12 ಏಪ್ರಿಲ್ 2022, 9:14 IST
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ   


ಮೈಸೂರು: 'ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

‘ಇದರಲ್ಲಿ ನನ್ನ ಪಾತ್ರ ಇಲ್ಲ. ಹೀಗಾಗಿ, ನಾನು ರಾಜೀನಾಮೆ ನೀಡುವುದಿಲ್ಲ' ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

'ಆತ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು' ಎಂದು ಹೇಳಿದರು.

ADVERTISEMENT

ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ‌ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.