ಪಿರಿಯಾಪಟ್ಟಣ: ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಮತ್ತು ಪಟ್ಟಣ ವ್ಯಾಪ್ತಿಯ ವಿವಿಧ ಕೆರೆಗಳಿಗೆ ತಡೆಗೋಡೆ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೆ.ವೆಂಕಟೇಶ್ ಈಚೆಗೆ ಚಾಲನೆ ನೀಡಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನ ಸಾಮಾನ್ಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಶ್ರಮಿಸುತ್ತಿದೆ. ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಮಾಡುತ್ತಿದ್ದೇನೆ ಎಂದರು.
ಸಾರ್ವಜನಿಕರಿಗೆ ಅಧಿಕಾರಿಗಳು ತೊಂದರೆ ನೀಡಿದಲ್ಲಿ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ. ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶೀಘ್ರದಲ್ಲಿ ಸಾಗುವಳಿ ಜಮೀನು ದುರಸ್ತಿ ಮಾಡಿಸುವಂತೆ ಸೂಚಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೆಹಮತ್ ಜಾನ್ ಬಾಬು, ಟೌನ್ ಅಧ್ಯಕ್ಷ ಅಶೋಕ್ ಕುಮಾರ್ ಗೌಡ, ತಾ.ಪಂ ಇಒ ಸುನಿಲ್ ಕುಮಾರ್, ತಹಶೀಲ್ದಾರ್ ನಿಸರ್ಗಪ್ರಿಯ, ಪುರಸಭೆ ಸದಸ್ಯರಾದ ಮಂಜುನಾಥ್, ರವಿ, ಮಂಜುಳಾ, ರಾಜೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಎಇಇ ವೆಂಕಟೇಶ್, ದಿನೇಶ್, ಮಲ್ಲಿಕಾರ್ಜುನ, ನವೀನ್, ಕುಮಾರ, ಕೃಷ್ಣಮೂರ್ತಿ, ಕೃಷಿ ಇಲಾಖೆ ಪ್ರಸಾದ್, ಪಶುಪಾಲನ ಇಲಾಖೆ ಸೋಮಯ್ಯ, ಭೂಮಾಪನ ಇಲಾಖೆ ಮುನಿಯಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಗೋವಿಂದ ರಾಜು, ಬೆಟ್ಟದ ಪುರ ಬ್ಲಾಕ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಲೋಕೇಶ್, ಶಶಿಧರ್, ಶ್ರೀನಿವಾಸ್ ಚಂದ್ರಶೇಖರ್, ಸುಬ್ರಮಣ್ಯ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.