ADVERTISEMENT

ಸದನದೊಳಗೂ ಸಿದ್ದರಾಮಯ್ಯ ವೀರಾವೇಶ ತೋರಿಸಲಿ: ಸಚಿವ ಎಸ್.ಟಿ. ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 7:49 IST
Last Updated 19 ಸೆಪ್ಟೆಂಬರ್ 2020, 7:49 IST
ಸಚಿವ ಎಸ್.ಟಿ. ಸೋಮಶೇಖರ್
ಸಚಿವ ಎಸ್.ಟಿ. ಸೋಮಶೇಖರ್   

ಮೈಸೂರು: ‘ಸಿದ್ದರಾಮಯ್ಯನವರು ವೀರಾವೇಶದಿಂದ ಮೈಸೂರಿನಲ್ಲಿ ಏನೇನೋ ಮಾತನಾಡಿದ್ದಾರೆ. ಸೆ. 21ರಂದು ಅಧಿವೇಶನ ಆರಂಭವಾಗಲಿದ್ದು, ಸದನದೊಳಗೂ ಅದೇ ರೀತಿ ಮಾತಾಡಲಿ. ಅಷ್ಟೇ ವೀರಾವೇಶದಿಂದ ಉತ್ತರ ನೀಡುವಂಥ ಶಕ್ತಿಯನ್ನು ದೇವರು ನಮಗೂ ನೀಡಿದ್ದಾನೆ’ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ಇಲ್ಲಿ ತಿಳಿಸಿದರು.

ಸರ್ಕಾರ ಸತ್ತಿದೆ, ಸಚಿವರೂ ಕೆಲಸ ಮಾಡುತ್ತಿಲ್ಲ, ಇಬ್ಬಿಬ್ಬರು ಮುಖ್ಯಮಂತ್ರಿ ಇದ್ದಾರೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಈ ರೀತಿ ತಿರುಗೇಟು ನೀಡಿದರು.

‘ವಿರೋಧ ಪಕ್ಷದವರ ಕೆಲಸ ಏನಿದೆ? ವಿರೋಧ ಮಾಡುವುದಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಾರೆ. ನಾವು ಆಡಳಿತ ಪಕ್ಷದವರು ಆಡಳಿತ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.