ADVERTISEMENT

ರಾಜವಂಶಸ್ಥರ ಸಹಕಾರ ಕೋರಿದ ಸಚಿವ ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 3:35 IST
Last Updated 3 ಅಕ್ಟೋಬರ್ 2020, 3:35 IST
ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಶುಕ್ರವಾರ ಅರಮನೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರನ್ನು ಭೇಟಿಯಾಗಿ ಫಲ ತಾಂಬೂಲ ನೀಡಿದರು
ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಶುಕ್ರವಾರ ಅರಮನೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರನ್ನು ಭೇಟಿಯಾಗಿ ಫಲ ತಾಂಬೂಲ ನೀಡಿದರು   

ಮೈಸೂರು:ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಶುಕ್ರವಾರ ಅರಮನೆಗೆ ತೆರಳಿ ರಾಜವಂಶಸ್ಥರನ್ನು ಭೇಟಿಯಾದರು.

ಸಂಪ್ರದಾಯದಂತೆರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರಿಗೆ ಫಲ ತಾಂಬೂಲ ನೀಡಿದ ಅವರು ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು.

‘ಪ್ರತಿವರ್ಷದಂತೆ ದಸರಾ ಕಾರ್ಯ ಕ್ರಮಗಳಿಗೆ ಈ ಬಾರಿಯೂ ಸಂಪೂರ್ಣ ಸಹಕಾರ ನೀಡುತ್ತೇವೆ.ಕೋವಿಡ್ ಕಾರಣ ಎಚ್ಚರ ವಹಿಸಬೇಕು’ ಎಂದು ಪ್ರಮೋದಾದೇವಿ ಸಲಹೆ ನೀಡಿದರು.

ADVERTISEMENT

ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ,ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.