ಮೈಸೂರು:ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಶುಕ್ರವಾರ ಅರಮನೆಗೆ ತೆರಳಿ ರಾಜವಂಶಸ್ಥರನ್ನು ಭೇಟಿಯಾದರು.
ಸಂಪ್ರದಾಯದಂತೆರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಫಲ ತಾಂಬೂಲ ನೀಡಿದ ಅವರು ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು.
‘ಪ್ರತಿವರ್ಷದಂತೆ ದಸರಾ ಕಾರ್ಯ ಕ್ರಮಗಳಿಗೆ ಈ ಬಾರಿಯೂ ಸಂಪೂರ್ಣ ಸಹಕಾರ ನೀಡುತ್ತೇವೆ.ಕೋವಿಡ್ ಕಾರಣ ಎಚ್ಚರ ವಹಿಸಬೇಕು’ ಎಂದು ಪ್ರಮೋದಾದೇವಿ ಸಲಹೆ ನೀಡಿದರು.
ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ,ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.