ಮೈಸೂರು: ಇಲ್ಲಿನ ಕೆ.ಆರ್.ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಮಂಗಳವಾರ ವೈದ್ಯರ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ ಯರಗನಹಳ್ಳಿ ನಿವಾಸಿ ಗೀತಾ ಅವರ ಮೊಬೈಲ್ ಪಡೆದು ಪರಾರಿಯಾಗಿದ್ದಾನೆ.
ಇವರು ತಮ್ಮ ಸಂಬಂಧಿಕರೊಂದಿಗೆ ಅವಿನಾಶ್ ಎಂಬ ವ್ಯಕ್ತಿಯ ಕುರಿತು ಮಾತನಾಡುತ್ತಿದ್ದರು. ವೈದ್ಯನ ಸೋಗಿನಲ್ಲಿ ಅಲ್ಲಿಗೆ ಬಂದ ವ್ಯಕ್ತಿಯು ‘ನಿಮ್ಮ ಸಂಬಂಧಿ ಅವಿನಾಶ್ ಅವರೊಂದಿಗೆ ಮಾತನಾಡಬೇಕು’ ಎಂದು ಹೇಳಿ ಮೊಬೈಲ್ ಮೂಲಕ ಕರೆ ಮಾಡಿಸಿದ್ದಾನೆ. ಅವರೊಂದಿಗೆ ಮಾತನಾಡುತ್ತಿರುವಂತೆ ನಟಿಸುತ್ತಾ ಮೊಬೈಲ್ ಜತೆ ಹೊರಹೋಗಿದ್ದಾನೆ. ಬಳಿಕ ಹುಡುಕಿದಾಗ ಆತ ಪತ್ತೆಯಾಗಲಿಲ್ಲ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ.
ಮದುವೆ ಮಾಡಿಸುತ್ತೇನೆ ಎಂದು ಅತ್ಯಾಚಾರಗೈದ ಧರ್ಮಗುರು
ಹೈರಿಗೆ ಗ್ರಾಮದ ಮಸೀದಿಯ ಧರ್ಮಗುರು ಜಬೀವುಲ್ಲಾ ಎಂಬಾತ ತನ್ನದೇ ಧರ್ಮಕ್ಕೆ ಸೇರಿದ ಯುವತಿಗೆ ಮದುವೆಯಾಗಬೇಕಾದರೆ ಧಾರ್ಮಿಕ ವಿಧಿ ವಿಧಾನ ಅನುಸರಿಸಬೇಕು ಎಂದು ಹೇಳಿ ಅತ್ಯಾಚಾರ ಮಾಡಿದ್ದಾನೆ ಎಂಬ ದೂರು ಪಿರಿಯಾಪಟ್ಟಣ ಠಾಣೆಯಲ್ಲಿ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.