ADVERTISEMENT

ಪ್ರಧಾನಿ ಮೋದಿ ಕಾರಿಗೆ ಅಡ್ಡ ಬಂದಿದ್ದ ಯುವಕ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 20:33 IST
Last Updated 8 ಏಪ್ರಿಲ್ 2019, 20:33 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಮೈಸೂರು: ಕಳೆದ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ವೇಳೆ ಕಾರಿಗೆ ಅಡ್ಡವಾಗಿ ಬಂದಿದ್ದ ಯುವಕನನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಹಾರಾಜ ಕಾಲೇಜು ಮೈದಾನದಲ್ಲಿ 2016ರ ಜನವರಿಯಲ್ಲಿ ನಡೆದ ಸುತ್ತೂರು ಕ್ಷೇತ್ರದ ಶಿವರಾತ್ರಿ ರಾಜೇಂದ್ರ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮೋದಿ ಅವರು ವಾಪಸ್ ತೆರಳುವಾಗ ವಿನಯ್ ಎಂಬಾತ ರಕ್ಷಣಾ ವ್ಯವಸ್ಥೆ ಬೇಧಿಸಿ ಕಾರಿಗೆ ಅಡ್ಡವಾಗಿ ಬಂದಿದ್ದ. ಇದರಿಂದ ಸುಮಾರು 20 ಸೆಕೆಂಡ್‌ಗಳಷ್ಟು ಕಾಲ ಪ್ರಧಾನಿಯವರ ಸಂಚಾರದಲ್ಲಿ ವಿಳಂಬವಾಗಿತ್ತು. ಸದ್ಯ, ಈತನನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.