ಬೆಟ್ಟದಪುರ: ಸಮೀಪದ ಈಚೂರು ಗ್ರಾಮದ ಲೋಲಾಕ್ಷಿ (30) ಮತ್ತು ಮಗಳು ಸಂಧ್ಯಾ (9) ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ 2.20 ಗುಂಟೆ ಜಮೀನು ಇದ್ದು, ತಂಬಾಕು ,ರಾಗಿ ಬೆಳೆಯುತ್ತಿದ್ದರು. ಸೀಗೂರು ಎಸ್.ಬಿ.ಐ ಬ್ಯಾಂಕಿನಲ್ಲಿ 4 ಲಕ್ಷ, ಹಾಗೂ ಕೈ ಸಾಲ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಕೃಷಿ ಚಟುವಟಿಕೆಗಾಗಿ ಸಾಲ ಮಾಡಿದ್ದರು. ಬೆಳೆ ಸಕಾಲಕ್ಕೆ ಬಾರದೇ ನಷ್ಟ ಹೊಂದಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.