ADVERTISEMENT

​ಮೈಸೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ- ತಾಯಿ, ಮಗ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 8:19 IST
Last Updated 6 ಅಕ್ಟೋಬರ್ 2021, 8:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಇಲ್ಲಿನ ದಟ್ಟಗಳ್ಳಿ ಸಮೀಪದ ರಾಜರಾಜೇಶ್ವರಿನಗರ ರಿಂಗ್‌ರಸ್ತೆ ಜಂಕ್ಷನ್‌ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಟ್ಟಗಳ್ಳಿ ನಿವಾಸಿ ಗುಣಲಕ್ಷ್ಮೀ (35) ಹಾಗೂ ಇವರ ಪುತ್ರ ದೈವಿಕ್ (12) ಮೃತಪಟ್ಟವರು. ಕಾರನ್ನು ಚಾಲನೆ ಮಾಡುತ್ತಿದ್ದ ಗುಣಲಕ್ಷ್ಮಿ ಅವರ ಪತಿ ಜಗದೀಶ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

‘ಇವರು ಕುಶಾಲನಗರದಿಂದ ತಮ್ಮ ನಿವಾಸಕ್ಕೆ ತೆರಳುವಾಗ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಒಂದು ಏರ್‌ಬ್ಯಾಗ್‌ ತೆರೆದುಕೊಂಡಿದ್ದರಿಂದ ಜಗದೀಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಟೈರ್‌ಗಳು ಸಿಡಿದಿವೆ. ವಾಹನ ನಜ್ಜುಗುಜ್ಜಾಗಿದೆ. ಅಪಘಾತ ನಡೆದಾಗ ಆ ಭಾಗದಲ್ಲಿ ಮಳೆ ಸುರಿಯುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.