ADVERTISEMENT

ಮೈಸೂರು | ‘ಮುಡಾ ಹಗರಣ: ಸಿಬಿಐಗೆ ವಹಿಸಿ’

ಕರ್ನಾಟಕ ಸೇನಾ ಪಡೆ ಸದಸ್ಯರ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 5:09 IST
Last Updated 13 ಆಗಸ್ಟ್ 2024, 5:09 IST
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು   

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಹಳೆ ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು, ‘ನೂರಾರು ಕೋಟಿ ಹಗರಣ ನಡೆದರೂ ಆಡಳಿತ ಹಾಗೂ ವಿರೋಧ ಪಕ್ಷಗಳು ರಾಜಕೀಯ ದೊಂಬರಾಟದಲ್ಲಿ ತೊಡಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ‘ಪಕ್ಷಗಳ ರಾಜಕೀಯ ಕೆಸರೆರಚಾಟ ನೋಡಿ ಜನರಿಗೆ ಬೇಸರವಾಗಿದೆ. ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳು ಜನರ ನಿದ್ದೆ ಕೆಡಿಸಿವೆ. 80 ಸಾವಿರ ಜನರು ಮುಡಾ ನಿವೇಶನಕ್ಕೆ ಕಾದು ಕುಳಿತಿದ್ದರೆ, ಸರ್ಕಾರ, ರಾಜಕಾರಣಿಗಳು, ಮುಡಾ ಅಧಿಕಾರಿಗಳು ಹಗರಣದಲ್ಲಿ ತೊಡಗಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಹಗರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಆಯುಕ್ತರ ವಿಚಾರಣೆ ನಡೆಸದೇ ವರ್ಗಾವಣೆ ಮಾಡಿರುವುದು ಖಂಡನೀಯ’ ಎಂದರು.

ಸದಸ್ಯರಾದ ಸುರೇಶ್ ಗೋಲ್ಡ್, ಪ್ರಭುಶಂಕರ್, ಕೃಷ್ಣಪ್ಪ, ಶಿವಲಿಂಗಯ್ಯ, ಶಾಂತಕುಮಾರ್ ಗೌಡ, ನಾಗರಾಜ್, ವರಕೋಡು ಕೃಷ್ಣೇಗೌಡ, ಮಂಜುಳಾ, ಪ್ರಜೀಶ್, ಶಿವಕುಮಾರ್, ಭಾಗಮ್ಮ, ವಿ.ಮಹದೇವ್ ಪಡುವಾರಳ್ಳಿ, ಬೋಗಾದಿ ಸಿದ್ದೇಗೌಡ, ಪದ್ಮಾ, ಶಾಂತರಾಜೇ ಅರಸ್, ನಂದಕುಮಾರ್, ನಾರಾಯಣಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.