ಮೈಸೂರು: ಗೃಹಿಣಿಯೊಬ್ಬರನ್ನು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಮೂವರಿಗೆ ಇಲ್ಲಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದೆ.
ನಂಜನಗೂಡು ತಾಲ್ಲೂಕಿನ ಮುದ್ದಹಳ್ಳಿಯ ಗ್ರಾಮದ ನಿಂಗಣ್ಣ, ಅವರ ಪತ್ನಿ ನಾಗಮ್ಮ ಮತ್ತು ಅವರ ಪುತ್ರ ಎಂ.ಎನ್.ಪ್ರಸಾದ ಶಿಕ್ಷೆಗೆ ಗುರಿಯಾದವರು. ಇವರು ಇದೇ ಗ್ರಾಮದ ಮಹೇಶ್ ಎಂಬುವವರ ಪತ್ನಿ ಮಂಜುಳಾ ಅವರನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಹಂತಪ್ಪ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.