ADVERTISEMENT

ತಾಯಿ, ಗರ್ಭಿಣಿ ಪತ್ನಿ, ಮಕ್ಕಳನ್ನು ಕೊಂದು ಪರಾರಿ

ಸರಗೂರು ತಾಲ್ಲೂಕಿನ ಚಾಮೇಗೌಡನಹುಂಡಿಯಲ್ಲಿ ಘಟನೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 21:43 IST
Last Updated 29 ಏಪ್ರಿಲ್ 2021, 21:43 IST
ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ ಮೃತರ ಸಂಬಂಧಿಕರು
ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ ಮೃತರ ಸಂಬಂಧಿಕರು   

ಸರಗೂರು (ಮೈಸೂರು ಜಿಲ್ಲೆ): ತಾಲ್ಲೂಕಿನ ಚಾಮೇಗೌಡನಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳನ್ನು ಬುಧವಾರ ತಡರಾತ್ರಿ ಕೊಲೆಗೈದು ಪರಾರಿಯಾಗಿದ್ದಾನೆ.

ಕೆಂಪಾಜಮ್ಮ (60), ಪತ್ನಿ ಗಂಗಾ (28), ಪುತ್ರರಾದ ಸಾಮ್ರಾಟ್(4) ಹಾಗೂ ರೋಹಿತ್ (2) ಕೊಲೆಯಾದವರು.

ಆರೋಪಿ ಟೈಲರ್‌ ವೃತ್ತಿ ಮಾಡುತ್ತಿದ್ದ. 8ವರ್ಷದ ಹಿಂದೆ ಮದುವೆಯಾಗಿದ್ದು, ಆಗಾಗ್ಗೆ ಜಗಳವಾಗುತ್ತಿತ್ತು. ಸಂಬಂಧಿಕರು ರಾಜಿ ಮಾಡಿ ಒಂದಾಗಿಸುತ್ತಿದ್ದರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.