ADVERTISEMENT

ಜೋಡಿ ಕೊಲೆ ಆರೋಪಿ ಮುನಿಯಪ್ಪ ಬಂಧನ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 13:19 IST
Last Updated 14 ಸೆಪ್ಟೆಂಬರ್ 2020, 13:19 IST
ಮುನಿಯಪ್ಪ
ಮುನಿಯಪ್ಪ   

ಹುಣಸೂರು: ಜೋಡಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪಿರಿಯಾಪಟ್ಟಣದಲ್ಲಿ ಮೊಬೈಲ್‌ ಕರೆ ಆಧರಿಸಿ ಬಂಧಿಸಲಾಗಿದೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ಪೂವಯ್ಯ ತಿಳಿಸಿದರು.

ಘಟನೆ ವಿವರ: ಆ.28 ರಂದು ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದ ಸರ್ವೆ ನಂ 25ರ ದೇವೇಂದ್ರ ಎಂಬುವವರ ಹೊಲದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಅವಷೇಶ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡು ವಿಚಾರಣೆ ಹಂತದಲ್ಲಿ ಸತ್ತ ವ್ಯಕ್ತಿಯೂ ಮಾನವ ಮಾನವ ಅಲಿಯಾಸ್ ರಾಜಪ್ಪ (38) ಎಂದು ತಿಳಿದುಬಂದಿತ್ತು.

ಈ ಘಟನೆಯಲ್ಲಿ ಮುನಿಯಪ್ಪ ಮತ್ತು ರಾಜು ಎಂಬ ಸಹೋದರರು ಮುಖ್ಯ ಆರೋಪಿಯಾಗಿದ್ದು, ಇವರು ದೇವಸ್ಥಾನಗಳಲ್ಲಿ ಹುಂಡಿ ಒಡೆದು ಹಣ ಕಳ್ಳತನ ಮಾಡುವುದು ವೃತ್ತಿಯಾಗಿತ್ತು. ಗೌಡನಕಟ್ಟೆ ಘಟನೆಯಲ್ಲಿ ಮನಸ್ತಾಪ ಎದುರಾದ ಬಳಿಕ ಮಾನವನನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದರು.

ADVERTISEMENT

ಮತ್ತೊಂದು ಕೊಲೆ: ಆರೋಪಿ ಸಹೋದರರಾದ ಮುನಿಯಪ್ಪ ಮತ್ತು ರಾಜು ಇಬ್ಬರು ಕಾಲ್ನಡಿಗೆಯಲ್ಲಿ ವಿವಿಧ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದರು. ಆರೋಪಿ ಸ್ವಂತ ಮೊಬೈಲ್ ಇಲ್ಲದ ಕಾರಣ, ತನ್ನ ಸಂಬಂಧಿಕರಿಗೆ ದಾರಿಹೋಕರ ಫೋನ್ ಮೂಲಕ ಕರೆ ಮಾಡುತ್ತಿದ್ದ. ಈ ಮಧ್ಯೆ ಆರೋಪಿ ಮುನಿಯಪ್ಪ ತನ್ನ ಚಿಕ್ಕಪ್ಪನ ಮಗಳು ಪೂಜಾಳಿಗೆ ದೂರವಾಣಿ ಕರೆ ಮಾಡಿದ ಖಚಿತ ಮಾಹಿತಿ ಆಧರಿಸಿ, ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದರು.

ಕಾರ್ಯಾಚರಣೆಯಲ್ಲಿ ಪ್ರಭಾಕರ್, ಬೀರೇಗೌಡ, ಗಣೇಶ್, ಮಂಜುನಾಥ್, ಮಜಾಜ್, ಶಿವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.