ಮೈಸೂರು: ನಗರದಲ್ಲಿ ಶನಿವಾರ ಮಧ್ಯಾಹ್ನ ಹಾಡಹಗಲೇ ವ್ಯಕ್ತಿಯೊಬ್ಬರನ್ನು ಇರಿದು ಕೊಲೆ ಮಾಡಲಾಗಿದೆ.
ಗುಂಡೂರಾವ್ನಗರದ ನಿವಾಸಿ ಸುನಿಲ್ (29) ಕೊಲೆಯಾದವರು. ಇವರನ್ನು ದುಷ್ಕರ್ಮಿಗಳ ಗುಂಪೊಂದು ಮಧ್ಯಾಹ್ನ ಮೈಸೂರು–ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಹಿಂಭಾಗದ ಖಾಲಿ ಜಾಗದಲ್ಲಿ ‘ಡ್ರಾಗನ್’ನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೇವರಾಜ ಮಾರುಕಟ್ಟೆಯಲ್ಲಿ ಕುಂಕುಮ ವ್ಯಾಪಾರಿಯಾಗಿದ್ದ ಇವರು ಬೆಳಿಗ್ಗೆಯಷ್ಟೇ ಮತ್ತೊಂದು ಗುಂಪಿನ ನಡುವೆಜಗಳ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.