ಮೈಸೂರು: ನಗರದ ಶಾರದಾದೇವಿನಗರದ ನಿವಾಸಿಯೊಬ್ಬರು ನಾಪತ್ತೆಯಾಗಿದ್ದು, ಕೊಲೆ ಶಂಕೆ ಮೂಡಿದೆ.
ಈ ಸಂಬಂಧ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಾಪತ್ತೆಯಾದ ವ್ಯಕ್ತಿಯು ಆಟೊ ಚಾಲಕರಾಗಿದ್ದು, ಕೆಲವರೊಂದಿಗೆ ಬೋಗಾದಿ ಪೆಟ್ರೊಲ್ ಬಂಕ್ ಹಿಂಭಾಗ ಆಗಸ್ಟ್ 28ರಂದು ಸಂಜೆ ಕಾಣಿಸಿಕೊಂಡಿದ್ದರು. ಈ ವೇಳೆ ನಡೆದ ಗಲಾಟೆ ಘಟನೆ ಬಳಿಕ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ.
ಇವರನ್ನು ಕೊಲೆ ಮಾಡಿ ಹೂತಿರುವ ಶಂಕೆ ವ್ಯಕ್ತವಾಗಿರುವುದರಿಂದ ಶಂಕಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ‘ವ್ಯಕ್ತಿಯು ನಾಪತ್ತೆಯಾಗಿದ್ದು, ಹುಡುಕಾಟ ನಡೆದಿದೆ. ಕೆಲವು ಸಂಶಯಗಳ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ನಾಪತ್ತೆ ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.