ADVERTISEMENT

ಮೈಸೂರಿನ ಪ್ರವಾಸಿಗರು ಶ್ರೀಲಂಕಾದಲ್ಲಿ ಸುರಕ್ಷಿತ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 11:17 IST
Last Updated 24 ಏಪ್ರಿಲ್ 2019, 11:17 IST

ಮೈಸೂರು: ನಗರದಿಂದ ಶ್ರೀಲಂಕಾಕ್ಕೆ ಪ್ರವಾಸಕ್ಕೆ ತೆರಳಿದ್ದ ಎಲ್ಲ 14 ಮಂದಿ ಸುರಕ್ಷಿತವಾಗಿದ್ದಾರೆ.

ಭೂಗರ್ಭಶಾಸಜ್ಞರಾದ ಎಂ.ವಿ.ರವಿಶಂಕರ್, ಕೆ.ವಿ.ವೇದಮೂರ್ತಿ, ಚನ್ನಬಸಪ್ಪ, ವಿನಯ್ ರಂಗನಾಥ್, ಎಚ್.ಎನ್.ಉಮೇಶ್, ಶೈಲಾ, ಮೌನಾ ಉಮೇಶ್, ಪೂರ್ಣಿಮಾ ರವಿಶಂಕರ್, ಅನುಪ್ ರವಿಶಂಕರ್, ಬಿ.ಎಸ್.ಶಾಲಿನಿ, ಸ್ವರೂಪ, ಗೌತಮಿ ವೇದಮೂರ್ತಿ ಹಾಗೂ ಸನತ್ ರಂಗನಾಥ್ ಸದ್ಯ ಸರಣಿ ಬಾಂಬ್ ಸ್ಫೋಟ ಸಂಭವಿಸಿರುವ ಕೊಲಂಬೋದಿಂದ 40 ಕಿಮೀ ದೂರದಲ್ಲಿರುವ ಬೆಂಟೋಟಾದ ಹಿಬಿಸ್ಕಸ್ ಹೋಟೆಲ್‍ನಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂರ್ವನಿಗದಿಯಂತೆ ಪ್ರವಾಸ ಮಾಡಿದ್ದರೆ ಬಾಂಬ್ ಸ್ಫೋಟಕ್ಕೆ ಬಲಿಯಾಗಬೇಕಿತ್ತು. ಪ್ರವಾಸದಲ್ಲಿ ಕೊಂಚ ಮಾರ್ಪಾಟು ಮಾಡಿದ್ದರಿಂದ ಜೀವ ಉಳಿಯಿತು ಎಂದು ಪ್ರವಾಸದಲ್ಲಿರುವ ಮೈ.ವಿ.ರವಿಶಂಕರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.