ADVERTISEMENT

ಮೈಸೂರು: ಮದ್ಯದ ಅಮಲಿನಲ್ಲಿ ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಗೈದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 7:35 IST
Last Updated 29 ಏಪ್ರಿಲ್ 2021, 7:35 IST
ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ ಸೇರಿದಂತೆ ಕುಟುಂಬದ ನಾಲ್ವರನ್ನು ಬುಧವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾನೆ
ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ ಸೇರಿದಂತೆ ಕುಟುಂಬದ ನಾಲ್ವರನ್ನು ಬುಧವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾನೆ   

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ ಸೇರಿದಂತೆ ಕುಟುಂಬದ ನಾಲ್ವರನ್ನು ಬುಧವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈತ ತನ್ನ ತಾಯಿ ಕೆಂಪಾಜಮ್ಮ (60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಅವರನ್ನು ಮದ್ಯ ಸೇವಿಸಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಂಬು ಗರ್ಭಿಣಿಯಾಗಿದ್ದ ಗಂಗಾ‌ ಅವರನ್ನು ಹೆರಿಗೆಗಾಗಿ ಇಂದು ಆಸ್ಪತ್ರೆಗೆ ಕರೆದೊಯ್ಯಬೇಕಿತ್ತು. ಸದ್ಯ ಮೃತದೇಹಗಳು ಮ‌ನೆಯ ಒಳಗೆ ಇದ್ದು, ಆರೋಪಿಯನ್ನು ಬಂಧಿಸುವವರೆಗೂ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕೆ ಬಿಡುವುದಿಲ್ಲ ಎಂದು ಮೃತ ಗಂಗಾ ಅವರ ಸಂಬಂಧಿಕರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.