ADVERTISEMENT

ಮಿದುಳು ನಿಷ್ಕ್ರಿಯ: ಚೆನ್ನೈಗೆ ಹೃದಯ ರವಾನೆ

ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ದರ್ಶನ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 20:04 IST
Last Updated 21 ಜನವರಿ 2022, 20:04 IST
ದರ್ಶನ್‌
ದರ್ಶನ್‌   

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ತಾಲ್ಲೂಕಿನ ಸೋಮನಹಳ್ಳಿಯ ದರ್ಶನ್‌ (24) ಅವರ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿ ಇತರರ ಬಾಳಿನಲ್ಲಿ ಬೆಳಕು ಮೂಡಿಸಿದ್ದಾರೆ.

ಅವರ ಹೃದಯವನ್ನು ಶುಕ್ರವಾರ ಮೈಸೂರಿನಿಂದ ವಿಮಾನದಲ್ಲಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆಗೆ ಸಾಗಿಸಲಾಯಿತು. ಹೃದಯ ಹೊತ್ತ ಆಂಬುಲೆನ್ಸ್ ಅಪೋಲೊ–ಬಿಜಿಎಸ್‌ ಆಸ್ಪತ್ರೆಯಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ‘ಗ್ರೀನ್‌ ಕಾರಿಡಾರ್’ (ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆ) ನಿರ್ಮಿಸಲಾಗಿತ್ತು.

ಒಂದು ಕಿಡ್ನಿಯನ್ನು ಬೆಂಗಳೂರಿನ ಆಸ್ಟರ್‌ ಸಿಎಂಐ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದು ಕಿಡ್ನಿ ಮತ್ತು ಯಕೃತ್‌ ಅನ್ನು ಅಪೋಲೊ–ಬಿಜಿಎಸ್‌ ಆಸ್ಪತ್ರೆಯಲ್ಲೇ ರೋಗಿಗಳಿಗೆ ಕಸಿ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.