ADVERTISEMENT

ಮೈಸೂರು ನಗರ ಪೊಲೀಸ್ ಕಮಿಷನರ್‌ಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 6:04 IST
Last Updated 25 ಆಗಸ್ಟ್ 2020, 6:04 IST
ಮೈಸೂರು ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ
ಮೈಸೂರು ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ   

ಮೈಸೂರು: ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ ಹಾಗೂ ಕೆಎಸ್‌ಆರ್‌ಪಿ ಎಸಿಪಿ ಭರತ್ ರಾಜ್‌‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ‌.

ಕೆಲವು ದಿನಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅವರಿಗೂ ಕೊರೊನಾ‌‌ ಸೋಂಕು ತಗುಲಿತ್ತು.

ರಿಷ್ಯಂತ್ ಅವರಿಗೆ ಸೋಂಕು‌ ದೃಢಪಡುವುದಕ್ಕೂ ಕೆಲ ದಿನಗಳ ಹಿಂದೆಯಷ್ಟೆ ಅವರೊಂದಿಗೆ ಕಮಿಷನರ್ ಚಂದ್ರಗುಪ್ತ ಅವರು ಸಭೆ ನಡೆಸಿದ್ದರು. ಹೀಗಾಗಿ ಯಾವುದೇ ಲಕ್ಷಣಗಳು ಇರದಿದ್ದರೂ ತಪಾಸಣೆಗೆ ಒಳಗಾದಾಗ ಸೋಂಕು ದೃಢಪಟ್ಟಿದೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.