ADVERTISEMENT

ಮೈಸೂರು: ಜುಲೈ 7ರಂದು ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 9:05 IST
Last Updated 4 ಜುಲೈ 2021, 9:05 IST
ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡುತ್ತಿರುವುದು
ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡುತ್ತಿರುವುದು   

ಮೈಸೂರು: ಬೆಲೆ ಏರಿಕೆ ವಿರೋಧಿಸಿ ಜುಲೈ 7 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೈಕಲ್ ಜಾಥಾ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಅವರು ಭಾನುವಾರ ಸಹಾಯ ಹಸ್ತ ಕಾರ್ಯಕ್ರಮದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಾಥಾಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ. 5 ಕಿ.ಮೀವರೆಗೆ ಜಾಥಾ ಸಂಚರಿಸಲಿದೆ ಎಂದು ಅವರು ಹೇಳಿದರು.

ADVERTISEMENT

ಸಹಾಯಹಸ್ತ ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 20 ಜನರನ್ನು ಕೊರೊನಾ ವಾರಿಯರ್ ಎಂದು ಆಯ್ಕೆ ಮಾಡಿ, ಅವರು ಕೊರೊನಾದಿಂದ ನೊಂದವರ ಮನೆಗೆ ಭೇಟಿ ನೀಡಿ‌ ಸಾಂತ್ವನ ಹೇಳಬೇಕು ಎಂದು ಅವರು ಹೇಳಿದರು.

ಬಹಳಷ್ಟು ಮಂದಿ ಕೊರೊನಾದಿಂದ ಮೃತಪಟ್ಟವರಿಗೆ ಕೋವಿಡ್ ಮರಣ ಪ್ರಮಾಣ ಪತ್ರ ನೀಡಿಲ್ಲ‌. ಹಾಗಾಗಿ ಸಾಂತ್ವನದ ಜತೆಯಲ್ಲಿ ಪರಿಷ್ಕೃತ ಮರಣಪ ಪ್ರಮಾಣ ಪತ್ರದ ಅರ್ಜಿಯನ್ನು ವಿತರಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 30 ಸಾವಿರ ಮಂದಿ ಕೋವಿಡ್ ನಿಂದ ಮೃತ ಪಟ್ಟಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ‌. ಆದರೆ ವಾಸ್ತವದಲ್ಲಿ 3.5 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.