ಮೈಸೂರು: ನವರಾತ್ರಿಯ ಒಂಬತ್ತನೇ ದಿನದಂದು ಮಹಾನವಮಿ ಅಂಗವಾಗಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಭಾನುವಾರ ಚಂಡಿಕಾ ಹೋಮ ನೆರವೇರಿತು.
ದೇಗುಲದ ಪ್ರಧಾನ ಅರ್ಚಕ ಎನ್.ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಹೋಮ ನಡೆಯಿತು. ಆಯುಧ ಪೂಜೆ ನಿಮಿತ್ತ ಬೆಟ್ಟಕ್ಕೆ ಭೇಟಿ ನೀಡಿದ್ದ ಭಕ್ತರು ದೇವಿ ದರ್ಶನ ಪಡೆದರು.
ಮಹಾನವಮಿಯಂದು ಚಾಮುಂಡೇಶ್ವರಿಗೆ ಮಹಾಲಕ್ಷ್ಮೀಯ ಅಲಂಕಾರ ಮಾಡಲಾಗಿದೆ. ಕಮಲ ವಾಹಿನಿ ಚಾಮುಂಡೇಶ್ವರಿಯ ಕಣ್ತುಂಬಿಕೊಳ್ಳಲು ಭಕ್ತರು ಮುಗಿಬಿದ್ದರು.
ವಿಜಯದಶಮಿಯಂದು ಚಾಮುಂಡೇಶ್ವರಿ ಅಶ್ವಾರೂಢಳಾಗಿ ಕಂಗೊಳಿಸಲಿದ್ದಾಳೆ ಎಂದು ದೇಗುಲದ ಪ್ರಧಾನ ಅರ್ಚಕ ಎನ್.ಶಶಿಶೇಖರ್ ದೀಕ್ಷಿತ್ ಪ್ರಜಾವಾಣಿಗೆ ತಿಳಿಸಿದರು.
ನವರಾತ್ರಿಯ ಒಂಬತ್ತು ದಿನವೂ ದೇಗುಲದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆಯಾಗಿದೆ. ಲೋಕಕಲ್ಯಾಣರ್ಥವಾಗಿ ಪ್ರಾರ್ಥನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.