ADVERTISEMENT

ಮೈಸೂರು: ಅರಮನೆ ತಲುಪಿದ ಗಜಪಡೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2019, 7:23 IST
Last Updated 26 ಆಗಸ್ಟ್ 2019, 7:23 IST
   

ಮೈಸೂರು: ದಸರಾ ಮೆರವಣಿಗೆಯಲ್ಲಿ ಭಾಗಿಯಾಗುವ ಗಜಪಡೆ ಸೋಮವಾರ ಅರಮನೆ ಪ್ರವೇಶಿಸಿದೆ.

ಅರಣ್ಯ ಭವನದಿಂದ ರಸ್ತೆ ಮೂಲಕ ಅರಮನೆಯತ್ತ ದಸರಾ ಆನೆಗಳು ಹೆಜ್ಜೆ ಹಾಕಿದವು. ರಸ್ತೆಯ ಇಕ್ಕೆಲಗಳಲ್ಲಿ ನಿಂತ ಜನರು ಕುತೂಹದಿಂದ ಗಜಪಡೆಯನ್ನು ಕಣ್ತುಂಬಿಕೊಂಡರು.

ಈಗ ಮೊದಲ ಹಂತದಲ್ಲಿ ಆರು ಆನೆಗಳು ಅರಮನೆ ಆವರಣ ಪ್ರವೇಶಿಸಿವೆ.ಅರಮನೆ ಆವರಣಕ್ಕೆ ಬಂದ ಗಜಪಡೆಗೆ ಜಿಲ್ಲಾಡಳಿತ ಸ್ವಾಗತ ಕೋರಿದೆ.ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.