ADVERTISEMENT

ಮೈಸೂರು: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 12:47 IST
Last Updated 12 ಜೂನ್ 2020, 12:47 IST
   

ಪಿರಿಯಾಪಟ್ಟಣ (ಮೈಸೂರು): ತಾಲ್ಲೂಕಿನ ಸನ್ಯಾಸಿಪುರ ಗ್ರಾಮದ ಎಸ್.ಎಂ.ಕರಿಗೌಡ (55)ಸಾಲ ಬಾಧೆ ತಾಳಲಾರದೇ ಗುರುವಾರ ರಾತ್ರಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರಿಗೌಡ ಅವರಿಗೆ ಏಳು ಎಕರೆ ಜಮೀನಿದ್ದು, ಬ್ಯಾಂಕ್‌ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಮನೆಯಲ್ಲಿ ಜೋಳದ ಬೆಳೆಗೆ ಉಪಯೋಗಿಸುವ ವಿಷದ ಮಾತ್ರೆಯನ್ನು ಸೇವಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ಶಿವಮ್ಮ ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.