ADVERTISEMENT

ಮೈಸೂರು: ಫಲಾನುಭವಿಗಳೊಂದಿಗೆ ರಾಜ್ಯಪಾಲರ ಸಂವಾದ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 13:37 IST
Last Updated 18 ಆಗಸ್ಟ್ 2022, 13:37 IST
   

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಇಲ್ಲಿನ ಅತಿಥಿ ಗೃಹದಲ್ಲಿ ಗುರುವಾರ ಸಂವಾದ ನಡೆಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ, ನರೇಗಾದಲ್ಲಿ ವಿವಿಧ ಸಹಾಯಧನ ಪಡೆದ ಫಲಾನುಭವಿಗಳು, ಎನ್ಎಚ್‌ಎಂಡಿ ಅನುದಾನ ಪಡೆದ ಫಲಾನುಭವಿಗಳ ಅನಿಸಿಕೆಗಳನ್ನು ಆಲಿಸಿದರು.

‘ಜನ ಕಲ್ಯಾಣಕ್ಕಾಗಿ ಸರ್ಕಾರಗಳ ಜಾರಿಗೊಳಿಸಿರುವ ಯೋಜನೆಗಳನ್ನು ಜನರು ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಇತರರಿಗೂ ಮಾಹಿತಿ ನೀಡಬೇಕು. ಯೋಜನೆಗಳ ಲಾಭದಿಂದ ಯಾವುದೇ ವ್ಯಕ್ತಿಯೂ ವಂಚಿತವಾಗದಂತೆ ನೋಡಿಕೊಳ್ಳಬೇಕು’ ಎಂದರು.

ADVERTISEMENT

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.