ADVERTISEMENT

ಮೈಸೂರಿನ ಭೂ ಮಾಫಿಯಾ ತನಿಖೆಗೆ ಅಡ್ಡಿಪಡಿಸುವುದಿಲ್ಲ: ಸಚಿವ ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 9:47 IST
Last Updated 10 ಜೂನ್ 2021, 9:47 IST
ಸಚಿವ ಎಸ್‌.ಟಿ.ಸೋಮಶೇಖರ್‌
ಸಚಿವ ಎಸ್‌.ಟಿ.ಸೋಮಶೇಖರ್‌   

ಮೈಸೂರು: ‘ಜಿಲ್ಲೆಯಲ್ಲಿನ ಭೂ ಮಾಫಿಯಾ ವಿಚಾರವಾಗಿ ಜಿಲ್ಲಾಧಿಕಾರಿ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ತನಿಖೆಗೆ ನಾವು ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಗುರುವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾದೇಶಿಕ ಆಯುಕ್ತರಿಗೂ ಕೆಲವರು ದೂರು ನೀಡಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಹಿಂದಿನ ಜಿಲ್ಲಾಧಿಕಾರಿ ಕೈಗೆತ್ತಿಗೊಂಡಿರುವ ತನಿಖೆಗಳನ್ನು ಈಗಿನ ಜಿಲ್ಲಾಧಿಕಾರಿ ಮುಂದುವರಿಸಲಿದ್ದಾರೆ’ ಎಂದರು.

ರೋಹಿಣಿ ಸಿಂಧೂರಿ ಅವರನ್ನೇ ತನಿಖಾಧಿಕಾರಿಯಾಗಿ ನೇಮಿಸಿಬೇಕೆಂದು ಎಚ್‌.ವಿಶ್ವನಾಥ್‌ ನೀಡಿರುವ ಸಲಹೆ ಕುರಿತು, ‘ಸಿಂಧೂರಿ ಅವರನ್ನೇ ನೇಮಿಸಲಿ, ಅದು ಸಂತೋಷದ ವಿಚಾರ. ವಿಶ್ವನಾಥ್‌ ಹಿರಿಯ ನಾಯಕ. ಅವರ ಸಲಹೆ ಸ್ವೀಕಾರವಾಗುವಂಥದ್ದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.