
ಪ್ರಜಾವಾಣಿ ವಾರ್ತೆ
ಹಂಪಾಪುರ: ಸಮೀಪದ ಕೆ.ಎಂ. ಹುಂಡಿ ಗ್ರಾಮದಲ್ಲಿ ಬೋನಿಟ್ಟ ಇಪ್ಪತ್ತನಾಲ್ಕು ಗಂಟೆಯೊಳಗೆ ಚಿರತೆ ಸೆರೆಯಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ರೈತರು ಸೆರೆಹಿಡಿಯುವಂತೆ ಸಾಮಾಜಿಕ ಅರಣ್ಯಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದರು. ಗ್ರಾಮದ ನಂಜೇಗೌಡ ಎಂಬುವವರ ಜಮೀನಿನಲ್ಲಿ ಸೋಮವಾರ ಚಿರತೆ ಸೆರೆಯಾಗಿದೆ. ಗಂಡು ಚಿರತೆಯಾಗಿದ್ದು 3 ವರ್ಷದ್ದು ಎಂದು ಅಂದಾಜಿಸಲಾಗಿದೆ.
ಸೆರೆ ಸಿಕ್ಕ ಚಿರತೆಯನ್ನು ಚಿಕಿತ್ಸೆಗೆ ಒಳಪಡಿಸಲಾಗದ್ದು, ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ, ಆ ಬಳಿಕ ಮೇಲಾಧಿಕಾರಿಗಳ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾಮಾಜಿಕ ಅರಣ್ಯದ ವಲಯಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.