ಮೈಸೂರು:67ನೇ ವನ್ಯಜೀವಿ ಸಪ್ತಾಹದ ಅಂಗವಾಗಿಅರಮನೆ ಆವರಣದಲ್ಲಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಅರಣ್ಯ ಇಲಾಖೆ ನಮ್ಮ ನಡಿಗೆ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕಡೆಗೆ ಜಾಗೃತಿ ಜಾಥಾ ಆಯೋಜಿಸಿತ್ತು.
ಕೋಟೆ ಆಂಜನೇಯಸ್ವಾಮಿ ದೇಗುಲ ಸಮೀಪದ ಬಲರಾಮ ದ್ವಾರದಿಂದ ಚಾಮರಾಜೇಂದ್ರ ವೃತ್ತದ ವರೆಗೆ ಜಾಥಾ ನಡೆಯಿತು.
ಎಪಿಸಿಸಿಎಫ್ ಜಗತ್ ರಾಮನ್, ಸಿಸಿಎಫ್ ಹೀರಾಲಾಲ್, ಡಿಸಿಎಫ್ ಗಳಾದ ಕರಿಕಾಳನ್ ಹಾಗೂ ಕಮಲಾ ಕರಿಕಾಳನ್ ಇದ್ದರು. ಕುವೆಂಪುನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.