ADVERTISEMENT

ಎರಡೇ ಗಂಟೆಗಳಲ್ಲಿ ಅಪಹರಣಕಾರರ ಬಂಧನ

ಆಲನಹಳ್ಳಿ ಪೊಲೀಸರ ಮಿಂಚಿನ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 10:52 IST
Last Updated 3 ಡಿಸೆಂಬರ್ 2019, 10:52 IST

ಮೈಸೂರು: ಆಲನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಅಪಹರಣಕಾರರಾದ ಮಂಜುನಾಥ (29), ನಾಗರಾಜು (25) ಹಾಗೂ ನವೀನ್ (32) ಎಂಬುವವರನ್ನು ಕೇವಲ ಒಂದೇ ಗಂಟೆಯಲ್ಲೇ ಬಂಧಿಸಿದ್ದಾರೆ.

ಇವರು ದೇವೇಗೌಡ ವೃತ್ತದಲ್ಲಿ ಯಶವಂತ ಎಂಬುವವರನ್ನು ಅಪಹರಿಸಿ ಅವರ ಸೋದರ ಮನು ಅವರ ಬಳಿ ₹ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಎಸಿಪಿ ಶಶಿಧರ್ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ಎಚ್.ಹರಿಯಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿತು.

ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿಗಳಿಗೆ 7 ವರ್ಷ ಶಿಕ್ಷೆ

ADVERTISEMENT

ಆಸ್ಪತ್ರೆಯಲ್ಲಿ ದಾಖಲಾಗಿ ತಪ್ಪಿಸಿಕೊಂಡಿದ್ದ ಸುನೀಲ್ ಮತ್ತು ಸತೀಶ್ ಎಂಬ ಕೈದಿಗಳಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 7 ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.

ಆಸ್ಪತ್ರೆಯಲ್ಲಿ ಮೂರ್ಛೆರೋಗ ಬಂದವರಂತೆ ನಟಿಸಿ ಇವರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ನ್ಯಾಯಾಧೀಶರಾದ ಜೆರಾಲ್ಡ್ ರುಡಾಲ್ ಮೆಂಡೋನ್ಸಾ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಡಿ.ಆನಂದ ಕುಮಾರ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.